33.1 C
Bengaluru
May 14, 2026
Karnataka Bhagya
ಕರ್ನಾಟಕ

ವನಮಹೋತ್ಸವ ಬ್ಯಾನರ್‌ನಲ್ಲಿ ಶಾಸಕರನ್ನೇ ಕೈಬಿಟ್ಟಾರಲ್ರಿ

ಕರ್ನಾಟಕ ಭಾಗ್ಯ ವಾರ್ತೆ

ಯಾದಗಿರಿ : ಎಡವಟ್ಟು ಮಾಡಿಕೊಂಡ ಅರಣ್ಯ ಇಲಾಖೆ. ಸೋಮವಾರ ಡಿಸಿ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ವನಮಹೋತ್ಸವ -೨೦೨೫ ಕರ‍್ಯಕ್ರಮದಲ್ಲಿ ಹಾಕಲಾಗಿದ್ದ ಬ್ಯಾನರ್ ನಲ್ಲಿ ಜಿಲ್ಲೆಯ ಶಾಸಕರ ಭಾವಚಿತ್ರಗಳೇ ಇರಲಿಲ್ಲ. ಹಾಗೇ ಹಾಕಿದ್ದ ಬ್ಯಾನರ್ ಯಡಿಯೇ ಅರಣ್ಯ ಸಚಿವರು ಬಂದು ಕರ‍್ಯಕ್ರಮ ಮಾಡುವವರಿದ್ದರು. ಅಷ್ಟರಲ್ಲಿಯೇ ಕುಂಬಕರ‍್ಣನ ನಿದ್ದೆಯಿಂದ ಅರಣ್ಯ ಅಧಿಕಾರಿಗಳು ಎದ್ದೋ,ಬಿದ್ದೋ ಎಂಬಂತೆಯೇ ಓಡಿ ಹೋಗಿ ಕೈಬಿಟ್ಟ ಇಬ್ಬರ ಶಾಸಕರು ಇರುವ ಸಣ್ಣದೊಂದು ಬ್ಯಾನರ್ ಮಾಡಿಕೊಂಡು ಬಂದು ಸಾವಿರಾರು ಮಂದಿ ಮುಂದೆ ಏಣಿ ಇಟ್ಟು ಆ ಬ್ಯಾನರ್ ಕಟ್ಟುವ ಮೂಲಕ ತಾವು ಮಾಡಿದ ತಪ್ಪನ್ನು ತಾವೇ ಬಹಿರಂಗ ಮಾಡಿಕೊಳ್ಳುವ ಮೂಲಕ ಅಪಹಾಸ್ಯಕ್ಕೆ ಗುರಿಯಾದರು.
ನಾಲ್ಕು ಜನ ಶಾಸಕರು ಇರುವ ಜಿಲ್ಲೆಯಲ್ಲಿ ಹಮ್ಮಿಕೊಂಡಿದ್ದ ಕರ‍್ಯಕ್ರಮಕ್ಕಾಗಿ ಸಿದ್ದ ಪಡಿಸಿದ್ದ ಬ್ಯಾನರ್ ನಲ್ಲಿ ಸಿಎಂ,ಡಿಸಿಎಂ, ಅರಣ್ಯ ಸಚಿವ, ಜಿಲ್ಲಾ ಉಸ್ತುವಾರಿ ಸಚಿವರ ಮತ್ತು ಯಾದಗಿರಿ ಶಾಸಕರ ಭಾವಚಿತ್ರಗಳನ್ನು ಮಾತ್ರ ಹಾಕಿದ್ದನ್ನು ವೇದಿಕೆ ಹಿಂದೇ ದೊಡ್ಡದಾಗಿ ನೇತು ಹಾಕಿದ್ದ ಅರಣ್ಯ ಇಲಾಖೆಯವರಿಗೆ ಸುರಪುರ ಮತ್ತು ಗುರುಮಠಕಲ್ ಶಾಸಕರ ಭಾವಚಿತ್ರ ಹಾಕುವುದನ್ನೇ ಮರತೇ ಬಿಟ್ಟಿದ್ದರು. ಅದೇಗೋ ಕೊನೆ ಗಳಿಗೆಯಲ್ಲಿ ಗಮನಿಸಿ, ತಾಬುಡ್ ತುಬುಡ್ ಬಿಟ್ಟುಹೊದ ಶಾಸಕರ ಪೊಟೊ ಇರುವ ಬ್ಯಾನರ್ ತಂದು ಅದರ ಅಂಟಿಸಿದರು.
ಒಂದು ದೊಡ್ಡ ಇಲಾಖೆಯಾಗಿರುವ ಅರಣ್ಯ ಇಲಾಖೆಯಿಂದ ಆದ ಈ ಪ್ರಮಾದದ ಬಗ್ಗೆ ಸಭಿಕರು ತಮಗೆ ತಿಳಿದಂಗ ಮಾತುಗಳು ಆಡಿದ್ದು ಕೇಳಿಬಂದವು.

Related posts

ಬಡ, ಪ್ರತಿಭಾವಂತ ಮಕ್ಕಳು ಮೆಡಿಕಲ್ ಓದಬೇಕನ್ನುವುದು ನನ್ನಾಸೆ : ಸಚಿವ ಡಾ.ಶರಣಪ್ರಕಾಶ ಪಾಟೀಲ್

Mahesh Kalal

ಯಾದಗಿರಿ ಜಿಲ್ಲೆಯ ಸುರಪುರ ಮತಕ್ಷೇತ್ರದ ಉಪ ಚುನಾವಣೆಯ ಫಲಿತಾಂಶ

Mahesh Kalal

ಖಳನಾಯಕಿಯಾಗಿ ಅಬ್ಬರಿಸುತ್ತಿರುವ ಕಾಫಿ ನಾಡಿನ ಕುವರಿ ಆರೋಹಿ ನೈನಾ

Nikita Agrawal

Leave a Comment

Share via
Copy link
Powered by Social Snap