24.1 C
Bengaluru
March 29, 2026
Karnataka Bhagya
ಹೋಮ್

ಮಳೆಯಿಂದ ಹಾನಿಗೊಳಗಾದ ನಗರದ ವಿವಿಧ ವಾರ್ಡ್ಗಳಿಗೆ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಭೇಟಿ

ಮಳೆಯಿಂದ ಹಾನಿಗೊಳಗಾದ ನಗರದ ವಿವಿಧ ವಾರ್ಡ್ಗಳಿಗೆ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಭೇಟಿ

ತತಕ್ಷಣ ಪರಿಹಾರಕ್ಕೆ ಕ್ರಮ

ಕರ್ನಾಟಕ ಭಾಗ್ಯ ವಾರ್ತೆ

ಯಾದಗಿರಿ : ಗುರುವಾರ ಸಂಜೆ ಭಾರಿ ಬಿರುಗಾಳಿ ಸಹಿತ ಮಳೆಯಿಂದಾಗಿ ಹಾನಿಗೊಳಗಾದ ಯಾದಗಿರಿ ನಗರದ ವಿವಿಧ ವಾರ್ಡ್ಗಳ ಬಡಾವಣೆಗಳಾದ ಯಾದಗಿರಿ ನಗರದ ಲಕ್ಷಿö್ಮÃ ನಗರ, ಬಸವೇಶ್ವರ ನಗರ, ಹೊಸಳ್ಳಿ ಕ್ರಾಸ್, ಫಿಲ್ಟರ್ ಬೆಡ್ ಏರಿಯಾ, ಅಜೀಜ್ ಕಾಲೋನಿ, ಗಂಜ್ ಏರಿಯಾ, ಶಶಿಧರ ಕಾಲೋನಿ, ಹೊಸ ಬಸ್‌ನಿಲ್ದಾಣ ಪ್ರದೇಶಗಳಿಗೆ ಭೇಟಿ ನೀಡಿ ಶಾಸಕ ಚೆನ್ನಾರೆಡ್ಡಿ ಪರಿಶೀಲಿಸಿದರು.

ಈ ವೇಳೆ ತಮ್ಮೊಂದಿಗೆ ಇದ್ದ ಅಧಿಕಾರಿಗಳಿಗೆ ತ್ವರಿತವಾಗಿ ಪರಿಹಾರ ಕಾರ್ಯಗಳನ್ನು ಮಾಡುವಂತೆ ಖಡಕ್ ಸೂಚನೆಯನ್ನು ನೀಡಿದರು.

ಹಾನಿಗೊಳಗಾದ ರಸ್ತೆ, ಚರಂಡಿ, ವಿದ್ಯತ್ ಕಂಬ, ನಳದ ಸಂಪರ್ಕ ಇವೆಲ್ಲವುಗಳನ್ನು ತ್ವರಿತವಾಗಿ ಸರಿಪಡಿಸಿ ಜನತೆಗೆ ಅನುಕೂಲ ಮಾಡಿಕೊಡಬೇಕೆಂದು ಸ್ಥಳದಲ್ಲಿದ್ದ ಅಧಿಕಾರಿಗಳಿಗೆ ಸೂಚನೆ ನೀಡಿದರು.

ನಗರಸಭೆ ಹಾಗೂ ಜೆಸ್ಕಾಂ ಸಿಬ್ಬಂದಿಗಳು ಹಾನಿಯಾದ ಪ್ರದೇಶಗಳಲ್ಲಿ ಅಗತ್ಯ ಪರಿಹಾರ ಕಾರ್ಯವನ್ನು ಚುರುಕಿನಿಂದ ಮಾಡಬೇಕು. ಜನತೆಯಿಂದ ಯಾವುದೇ ಕುಂದು ಕೊರತೆಗಳು ಬಂದಲ್ಲಿ ತಕ್ಷಣವೇ ಅವುಗಳನ್ನು ನಿವಾರಿಸಲು ಅಧಿಕಾರಿಗಳು ಮುಂದಾಗಬೇಕು. ಮುಂದೆ ಬರುವ ಮಳೆಗೆ ಮುನ್ನೆಚ್ಚರಿಕೆ ಕ್ರಮಗಳನ್ನು ಅನುಸರಿಸಿ ಜನತೆಯೊಂದಿಗೆ ಸಹಕರಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ನಗರಸಭೆ ಸದಸ್ಯರಾದ ಗಣೇಶ ದುಪ್ಪಲ್ಲಿ, ಚನ್ನಕೇಶವಗೌಡ, ಶರಣಗೌಡ ಮಾಲಿ ಪಾಟೀಲ, ಆರ್‌ಎಫ್ ಲಕ್ಷಿö್ಮÃಕಾಂತ, ಜೆಇ ಚಂದ್ರಕಾAತ, ಎಇಇ ರಜನೀಕಾಂತ, ಅಂಬರೀಶ ಜಾಕಾ, ಪ್ರಭಾಕರ್ ಇತರರಿದ್ದರು.

ಮಳೆಯಿಂದ ಹಾನಿಗೊಳಗಾದ ನಗರದ ವಿವಿಧ ವಾರ್ಡ್ಗಳಿಗೆ ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಭೇಟಿ

Related posts

ಕಲಬುರಗಿಯ ಸರ್ವಜ್ಞ ಕಾಲೇಜಿನಿಂದ ನೀಟ್‌ ಪರೀಕ್ಷೆಯಲ್ಲಿ ಅದ್ಭುತ ಸಾಧನೆ : ಮೊಹಮ್ಮದ್ ಮುಜಾಮಿಲ್ 667 ಅಂಕ ಪಡೆದು ಕಾಲೇಜಿಗೆ ಪ್ರಥಮ ಮತ್ತು ಸಂಧ್ಯಾ 651 ಅಂಕ ಪಡೆದು ದ್ವಿತೀಯ ಸ್ಥಾನ ಹಾಗೂ ಮೋನಿಕಾ 647 ಅಂಕ ಪಡೆದು ತೃತೀಯ ಸ್ಥಾನ

Karnatakabhagya

ಯಾದಗಿರಿ ನಗರದ ಆರ್ಯಭಟ್ಟ ಅಂತರರಾಷ್ಟಿçÃಯ ಶಿಕ್ಷಣ ಸಂಸ್ಥೆಯಲ್ಲಿ ಜಿಲ್ಲೆಯ ಪ್ರಾಥಮಿಕ, ಪ್ರೌಢಶಾಲಾ ವಿಜ್ಞಾನ ಶಿಕ್ಷಕರಿಗೆ ಭೌತ ಮತ್ತು ಜೀವ ವಿಜ್ಞಾನ ವಿಷಯದ ಕುರಿತು ೩ ದಿನಗಳ ಕಾರ್ಯಾಗಾರದ ಸಮಾರಂಭದಲ್ಲಿ ಪದ್ಮಶ್ರೀ ಭೌತಶಾಸ್ತçಜ್ಞ ಪ್ರೊ. ಹೆಚ್.ಸಿ ವರ್ಮಾ ಉಪನ್ಯಾಸ

Mahesh Kalal

ನಿಮ್ಮ ಮತ ನಿಮ್ಮ ಹಕ್ಕು, ಜಾಗೃತ ಮತದಾರ, ಸಧೃಢ ಪ್ರಜಾಪ್ರಭುತ್ವ, ನಿಮ್ಮ ಮತ ಗೌಪ್ಯವಾಗಿರಲಿ,

Karnatakabhagya

Leave a Comment

Share via
Copy link
Powered by Social Snap