26.8 C
Bengaluru
February 11, 2026
Karnataka Bhagya
Blogಕಲೆ/ಸಾಹಿತ್ಯ

ವಿಭಿನ್ನ ಪಾತ್ರದ ಮೂಲಕ ರಂಜಿಸಲು ಬರುತ್ತಿದ್ದಾರೆ ತಾರಾ

ನಟ ಸುಜಯ್ ಶಾಸ್ತ್ರಿ ಎಲ್ಲರ ಕಾಲೆಳೆಯುತ್ತೆ ಕಾಲ ಎಂಬ ಎರಡನೇ ಸಿನಿಮಾ ಮಾಡುತ್ತಿದ್ದಾರೆ. 80ರ ದಶಕದಲ್ಲಿನ ಕಥೆ ಹೊಂದಿರುವ ಈ ಸಿನಿಮಾದ ಮೂಲಕ ಸಂಗೀತ ನಿರ್ದೇಶಕ ಚಂದನ್ ಶೆಟ್ಟಿ ಅವರು ನಟನೆಗೆ ಕಾಲಿಡುತ್ತಿದ್ದಾರೆ. ಈಗ ಈ ಸಿನಿಮಾ ತಂಡದಿಂದ ಇನ್ನೊಂದು ಹೊಸ ಸುದ್ದಿ ಬಂದಿದೆ. ರಾಷ್ಟ್ರ ಪ್ರಶಸ್ತಿ ವಿಜೇತ ನಟಿ ತಾರಾ ಈ ಸಿನಿಮಾ ಬಳಗ ಸೇರಿಕೊಂಡಿದ್ದು ವಿಶೇಷ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.

“ತಾರಮ್ಮ ಈ ಸಿನಿಮಾದಲ್ಲಿ ರಿಂದವ್ವ ಪಾತ್ರ ಮಾಡುತ್ತಿದ್ದಾರೆ. ಚಮತ್ಕಾರ ಹಾಗೂ ಸ್ವಲ್ಪ ಅತೀಂದ್ರಿಯ ವ್ಯಕ್ತಿ ಆಗಿದ್ದು, ಅವರ ತತ್ವವು ಸಂತ ಶಿಶುನಾಳ ಶರೀಫರಂತೆ ಇರುತ್ತದೆ. ಅವರ ಲುಕ್ ಈ ಚಿತ್ರದ ಕಥೆಯಲ್ಲಿ ಪ್ರಭಾವ ಬೀರುತ್ತದೆ. ಅವರು ಈ ಪಾತ್ರ ಒಪ್ಪಿಕೊಂಡಿರುವುದಕ್ಕೆ ನನಗೆ ಖುಷಿ ತಂದಿದೆ. ಅವರು ಈಗಾಗಲೇ ಶೂಟಿಂಗ್ ಮುಗಿಸಿದ್ದಾರೆ” ಎಂದಿದ್ದಾರೆ ಸುಜಯ್ ಶಾಸ್ತ್ರಿ.

ಇತ್ತೀಚೆಗೆ ತಾರಾ ಅವರ ಲುಕ್ ನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದರು ಹಾಗೂ ಈ ಸಿನಿಮಾದಲ್ಲಿ ಭಾಗವಾಗಿರುವುದಕ್ಕೆ ಧನ್ಯವಾದಗಳನ್ನು ಹೇಳಿದ್ದರು. “ಮೊದಲನೆ ದಿನ ನಾನು ನಿಮಗೆ ಕಥೆ ಹೇಳಿದಾಗ ತುಂಬಾ ಪ್ರೀತಿ ತೋರಿಸಿದ್ದೀರಿ. ಕ್ಯಾಮೆರಾ ಎದುರು ಬಂದಾಗಲೂ ಅದೇ ಪ್ರೀತಿ ತೋರಿಸಿದ್ದೀರಿ. ನಿಮ್ಮ ಪಾತ್ರವನ್ನು ಪರಿಚಯ ಮಾಡಲು ಬಯಸುತ್ತೇನೆ. ಧನ್ಯವಾದಗಳು” ಎಂದಿದ್ದಾರೆ.

ಸದ್ಯ ಚಿತ್ರದ ಶೂಟಿಂಗ್ ಕನಕಪುರದಲ್ಲಿ ನಡೆಯುತ್ತಿದೆ. ಈ ಚಿತ್ರದಲ್ಲಿ ಅರ್ಚನಾ ಕೊಟ್ಟಿಗೆ ಕೂಡಾ ನಟಿಸುತ್ತಿದ್ದಾರೆ.

Related posts

ಹುಟ್ಟು ಹಬ್ಬಕ್ಕೆ ಅಭಿಮಾನಿಗಳಿಗೆ ಆಹ್ವಾ‌ನ ನೀಡಿದ ರಿಷಬ್ ಶೆಟ್ಟಿ- ಅಭಿಮಾನಿಗಳೊಡನೆ‌ ದೊಡ್ಡದಾಗಿ ಹುಟ್ಟು ಹಬ್ಬ ಆಚರಿಸಿಕೊಳ್ಳಲಿರುವ ವಿಶ್ವಶ್ರೇಷ್ಠ ಕನ್ನಡಿಗ

kartik

1000 ಕೋಟಿ ಬಜೆಟ್​ನಲ್ಲಿ ‘ಆದಿಪುರುಷ್​ 2’​ಓಂ‌ ರಾವತ್ ಐಡಿಯಾಗೆ ಪ್ರಭಾಸ್​ ಗ್ರೀನ್ ಸಿಗ್ನಲ್ ಕೊಟ್ರಾ…?

kartik

ವಿಶ್ವಸುಂದರಿಯ ಸೌಂದರ್ಯದ ಗುಟ್ಟು ಇದೇ ನೋಡಿ

Nikita Agrawal

Leave a Comment

Share via
Copy link
Powered by Social Snap