Karnataka Bhagya
Blogಕ್ರೀಡೆ

ಬಣ್ಣದ ಲೋಕದಲ್ಲಿ ಮುಂದಿನ ಹಂತಕ್ಕೆ ಭಡ್ತಿ ಪಡೆದ ಮೇಘಾ ಶೆಟ್ಟಿ..

ಜೊತೆ ಜೊತೆಯಲಿ ಧಾರಾವಾಹಿಯಲ್ಲಿ ನಾಯಕಿ ಅನು ಸಿರಿಮನೆ ಪಾತ್ರದಲ್ಲಿ ನಟಿಸುವ ಮೂಲಕ ಕಿರುತೆರೆಗೆ ಪ್ರವೇಶ ಮಾಡಿದ ಕರಾವಳಿ ಕುವರಿ ಮೇಘಾ ಶೆಟ್ಟಿ ತಮ್ಮ ಮುದ್ದಾದ ಅಭಿನಯದಿಂದ ಜನರ ಮನಗೆದ್ದ ಚೆಲುವೆ. ಕಿರುತೆರೆಯಲ್ಲಿ ಕಡಿಮೆ ಅವಧಿಯಲ್ಲಿ ಖ್ಯಾತಿ ಗಳಿಸಿರುವ ಮೇಘಾ ಈಗ ನಿರ್ಮಾಪಕಿಯಾಗುತ್ತಿದ್ದಾರೆ. ಇಷ್ಟು ದಿನ ನಟಿಯಾಗುಇ ಕರುನಾಡಿನಾದ್ಯಂತ ಮನೆ ಮಾತಾಗಿರುವ ಮೇಘಾ ಶೆಟ್ಟಿ ಇದೀಗ ನಿರ್ಮಾಪಕಿಯಾಗಿ ಭಡ್ತಿ ಪಡೆಯಲಿದ್ದಾರೆ.

ಕಲರ್ಸ್ ಕನ್ನಡ ವಾಹಿನಿಯಲ್ಲಿ ಆರಂಭವಾಗಲಿರುವ ಹೊಚ್ಚ ಹೊಸ ಧಾರಾವಾಹಿ ಕೆಂಡಸಂಪಿಗೆಯ ನಿರ್ಮಾಪಕಿಯಾಗಿ ಮೇಘಾ ಶೆಟ್ಟಿ ಕಾಣಿಸಿಕೊಳ್ಳಲಿದ್ದಾರೆ ಎಂಬ ಸುದ್ದಿ ಮೂಲಗಳಿಂದ ತಿಳಿದು ಬಂದಿದೆ. ಈ ವಿಚಾರ ತಿಳಿದ ಅಭಿಮಾನಿಗಳು ಇದೇನು ಇಷ್ಟು ಬೇಗ ಧಾರಾವಾಹಿ ನಿರ್ಮಾಣ ಮಾಡುವಷ್ಟು ಬೆಳೆದು ನಿಂತಿದ್ದಾರೆ. ಅದೃಷ್ಟ ಎಂದರೆ ಹೀಗಿರಬೇಕು ಎಂದೆಲ್ಲಾ ಸಾಮಾಜಿಕ ಜಾಲತಾಣದಲ್ಲಿ ಚರ್ಚಿಸುತ್ತಿದ್ದಾರೆ.

ಮೊದಲ ಧಾರಾವಾಹಿಯಲ್ಲಿಯೇ ನಾಯಕಿಯಾಗಿ ನಟಿಸುವ ಸುವರ್ಣಾವಕಾಶ ಪಡೆದುಕೊಂಡಿರುವ ಮೇಘಾ ಶೆಟ್ಟಿ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ ತ್ರಿಬಲ್ ರೈಡಿಂಗ್ ನಲ್ಲಿ ನಾಯಕಿಯಾಗಿ ನಟಿಸುವ ಮೂಲಕ ಬೆಳ್ಳಿತೆರೆಗೆ ಪಾದಾರ್ಪಣೆ ಮಾಡಿದರು‌. ದಿಲ್ ಪಸಂದ್ ಸಿನಿಮಾದಲ್ಲಿ ಡಾರ್ಲಿಂಗ್ ಕೃಷ್ಣ ಜೊತೆಗೆ ತೆರೆ ಹಂಚಿಕೊಳ್ಳಲಿರುವ ಮೇಘಾ ಶೆಟ್ಟಿ ಆಲ್ಬಂ ಹಾಡಿನಲ್ಲಿ ಹೆಜ್ಜೆ ಹಾಕಿ ಸೈ ಎನಿಸಿಕೊಂಡಿದ್ದಾರೆ. ಎಂ ಕೆ ಆರ್ಟ್ಸ್ ಲಾಂಛನದಲ್ಲಿ ಮೋನಿಕಾ ಕಲ್ಲೂರಿ ನಿರ್ಮಾಣ ಮಾಡಿರುವ ನೋಡು ಶಿವ ಆಲ್ಬಂ ಸಾಂಗ್ ನಲ್ಲಿ ಈಕೆ ಹೆಜ್ಜೆ ಹಾಕಿದ್ದು ನೆಟ್ಟಿಗರು ಫಿದಾ ಆಗಿದ್ದಾರೆ‌

Related posts

ಹೊಸ ಚಿತ್ರದೊಂದಿಗೆ ಒಟಿಟಿಗೆ ಬರಲಿದ್ದಾರೆ ಸತೀಶ್ ನೀನಾಸಂ.

Nikita Agrawal

ಕೊನೆಗೂ ಸಿಕ್ತು ಬಿಗ್ ಅಪ್ಡೇಟ್, kichcha 46 ಬಗ್ಗೆ ಸಿನಿತಂಡ ಕೊಟ್ಟ ಸುಳಿವು, ಜುಲೈ-2ಕ್ಕೆ ಟೀಸರ್ ಔಟ್..!

kartik

21 ವರ್ಷಗಳ ನಂತ್ರ ಭಾರತಕ್ಕೆ ವಿಶ್ವಸುಂದರಿ ಪಟ್ಟ- ಹರ್ನಾಜ್ ಕೌರ್ ಸಂಧು ಮಿಸ್ ಯೂನಿವರ್ಸ್

Nikita Agrawal

Leave a Comment

Share via
Copy link
Powered by Social Snap